Sunday, February 17, 2008
ಕಲ್ಲಾಡಿ ಪ್ರಶಸ್ತಿ ಪ್ರಕಟ
ದಿ.ಕಲ್ಲಾಡಿ ಕೊರಗ ಶೆಟ್ಟಿ ಮತ್ತು ವಿಠಲ ಶೆಟ್ಟಿ ಯಕ್ಷ ಪ್ರತಿಷ್ಠಾನದ ವತಿಯಿಂದ ವರ್ಷಂಪ್ರತಿ ನಾಲ್ಕು ಮಂದಿ ಹಿರಿಯ ಕಲಾವಿದರಿಗೆ ನೀಡುವ ಪ್ರಶಸ್ತಿಯನ್ನು ಈ ಬಾರಿ ತೆಂಕುತಿಟ್ಟಿನ ಅಗ್ರಮಾನ್ಯ ವೇಷಧಾರಿಗಳಾದ ಧರ್ಣಪ್ಪ ಶೆಟ್ಟಿ ಪೂಂಜಾಲಕಟ್ಟೆ, ಅಳಿಕೆ ಲಕ್ಷ್ಮಣ ಶೆಟ್ಟಿ, ಅರುವ ಕೊರಗಪ್ಪ ಶೆಟ್ಟಿ ಮತ್ತು ಮೇಳದ ಚೌಕಿ ಕುರಿಯಾಡಿ ಗೋಪಾಲ ಪೂಜಾರಿ ಇವರಿಗೆ ನ್ರಿತಿಷ್ಠಾನದ ಸಲಹಾ ಸಮಿತಿ ಸಂಚಾಲಕ ಭಾಸ್ಕರ ರೈ ಕುಕ್ಕುವಳ್ಳಿ ತಿಳಿಸಿದ್ದಾರೆ.
ಇರಾ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 17 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯನ್ನು ಚೌಟ ಪ್ರತಿಷ್ಠಾನದ ಅಧ್ಯಕ್ಷ ಡಿ.ಕೆ.ಚೌಟ ನೀಡಲಿದ್ದಾರೆ. ವಿಟ್ಲ ಕ್ಷೇತ್ರದ ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು ಎಂದವರು ವಿವರಿಸಿದರು.
Subscribe to:
Post Comments (Atom)
No comments:
Post a Comment