Wednesday, April 9, 2008

ಕೊಡಕ್ಕಲ್ಲು ಗೋಪಾಲಕೃಷ್ಣ ಭಟ್ಟರಿಗೆ ಪಾತಾಳ ಯಕ್ಷಕಲಾ ಪ್ರತಿಷ್ಠಾನದ ಪ್ರಶಸ್ತಿ


ಯಕ್ಷಗಾನದ ಹಿರಿಯ ಸ್ತ್ರೀ ಪಾತ್ರಧಾರಿ ಪಾತಾಳ ವೆಂಕಟ್ರಮಣ ಭಟ್ ಹೆಸರಿನಲ್ಲಿ ಕೊಡಮಾಡಲಾಗುತ್ತಿರುವ ಪಾತಾಳ ಯಕ್ಷಕಲಾ ಪ್ರತಿಷ್ಠಾನದ ಪ್ರಶಸ್ತಿಗೆ ಈ ಬಾರಿ ಹಾಸ್ಯಗಾರ ಕೊಡಕ್ಕಲ್ಲು ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಹರಿಕೃಷ್ಣ ಪುನರೂರು ಪ್ರಕಟಿಸಿದ್ದಾರೆ.
ಏ.14ರಂದು ರಾತ್ರಿ 8.30ಕ್ಕೆ ಕಾಸರಗೋಡಿನ ಎಡನೀರು ಶ್ರೀ ಕೃಷ್ಣ ರಂಗಮಂಟಪದಲ್ಲಿ ಜರುಗುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಡನೀರು ಸಂಸ್ಥಾನದ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರು ಆಶೀರ್ವಚನ ನೀಡಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಕೆ.ಅನಂತಕೃಷ್ಣ ವಹಿಸುವರು. ಪ್ರಧಾನ ಅಭ್ಯಾಗತರಾಗಿ ಪುತ್ತೂರಿನ ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಲಿರುವರು ಎಂದವರು ತಿಳಿಸಿದ್ದಾರೆ.
ಪ್ರಶಸ್ತಿಯು 5 ಸಾವಿರ ನಗದು, ಸ್ಮರಣಿಕೆಗಳನ್ನು ಒಳಗೊಂಡಿರುತ್ತದೆ. ಕಳೆದೆರಡು ವರ್ಷಗಳಲ್ಲಿ ಕಟೀಲು ಪುರುಷೋತ್ತಮ ಭಟ್ಟ, ಕಡಬ ಸಾಂತಪ್ಪ, ಪೆರುವೊಡಿ ನಾರಾಯಣ ಭಟ್ರವರಿಗೆ ಪಾತಾಳ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

No comments: